Categories: ಲೇಖನ

ಬೆಳಗಿನ ಶುಭೋದಯ ಸಂದೇಶಗಳ ಪ್ರಸ್ತುತತೆ ಮತ್ತು ಅಳವಡಿಕೆ……..

ಸಾಮಾಜಿಕ ಜಾಲತಾಣಗಳಲ್ಲಿ, ಹೆಚ್ಚಾಗಿ ಬೆಳಗಿನ ಹೊತ್ತು ನಮಗೆ ಬರುವ ಬಹುತೇಕ Good Morning Message ಗಳು ಮಹಾನ್ ವ್ಯಕ್ತಿಗಳು ಹೇಳಿರುವ Quotation ಗಳನ್ನು ಒಳಗೊಂಡಿರುತ್ತದೆ.

ಬುದ್ದ, ಬಸವ, ಯೇಸು, ಪೈಗಂಬರ್, ಮಹಾವೀರ, ಅಂಬೇಡ್ಕರ್, ಗಾಂಧಿ, ರೂಮಿ, ಚಾಣಕ್ಯ, ಗಿಬ್ರಾನ್, ಕಾರ್ಲ್ ಮಾರ್ಕ್ಸ್, ಗಾಲಿಬ್, ಸ್ವಾಮಿ ವಿವೇಕಾನಂದ, ಪರಮಹಂಸ, ಸರ್ವಜ್ಞ, ಭಗವದ್ಗೀತೆ, ಆಚಾರ್ಯತ್ರಯರು, ಖುರಾನ್, ಬೈಬಲ್, ಶರಣರು, ದಾಸರು, ಸೂಫಿ ಸಂತರು ಹೀಗೆ ಅನೇಕರ ವಾಣಿಗಳು ನಮಗಿಷ್ಟವಾಗಿವೆ ಎಂದು ಹಾಕುತ್ತೇವೆ.

ಒಂದು ಹಂತಕ್ಕೆ ಇದೆಲ್ಲಾ ಒಳ್ಳೆಯದೆ. ಆದರೆ ಈ ಸಂದೇಶಗಳನ್ನು ಮತ್ತು ಅದನ್ನು ಹೇಳಿರುವವರನ್ನು ನಾವು ಹೇಗೆ ಅರ್ಥಮಾಡಿಕೊಂಡಿದ್ದೇವೆ, ಅದನ್ನು ಹೇಗೆ ಅಳವಡಿಸಿಕೊಂಡಿದ್ದೇವೆ, ಅದರ ಸಾಮಾಜಿಕ ಪ್ರಸ್ತುತತೆ ಏನು ಎಂಬುದನ್ನು ಅದರೊಂದಿಗೆ ಹೇಳಬೇಕಾಗುತ್ತದೆ. ಇಲ್ಲದಿದ್ದರೆ ಅದೊಂದು ಕಾಟಾಚಾರದ ಒಣ ಸಂದೇಶವಾಗುತ್ತದೆ.

ಏಕೆಂದರೆ ಕಾಲದ ನಿರಂತರತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿರುತ್ತವೆ. ಕೆಲವು ಈಗಲೂ ಪ್ರಸ್ತುತವಾದರೆ, ಕೆಲವು ಸವಕಲು ನಾಣ್ಯಗಳು.
ಮತ್ತೆ ಕೆಲವು ಬದಲಾವಣೆಯಾಗಬೇಕಿದ್ದರೆ, ಇನ್ನೊಂದಿಷ್ಟು ಅಪಾಯಕಾರಿಯೂ ಹೌದು.

ಈ ಎಲ್ಲಾ ವ್ಯಕ್ತಿಗಳು ತಾವು ಜೀವಿಸಿದ್ದ ಕಾಲದ ಸ್ಥಿತಿಗತಿಗೆ ಅನುಗುಣವಾಗಿ ಒಂದಷ್ಟು ದೂರದೃಷಿಯಿಂದ ತಮ್ಮ ಚಿಂತನೆಗಳನ್ನು ದಾಖಲಿಸಿರುತ್ತಾರೆ. ಅದು ಈಗ ಎಷ್ಟರ ಮಟ್ಟಿಗೆ ಅಳವಡಿಕೆಗೆ ಯೋಗ್ಯ ಎಂದು ಯೋಚಿಸಬೇಕಾಗುತ್ತದೆ.

ಉದಾಹರಣೆಗೆ ಆಗ ರಾಜಪ್ರಭುತ್ವ ಈಗ ಪ್ರಜಾಪ್ರಭುತ್ವ, ಆಗ ಕಾಲ್ನಡಿಗೆ ಅಥವಾ ಕುದುರೆ.
ಈಗ ವಿಮಾನ, ಆಗ ಪಾರಿವಾಳ ಇಲ್ಲ ಧೂತ ಸಂದೇಶ ವಾಹಕ, ಈಗ ಇಂಟರ್ ನೆಟ್ – ಮೊಬೈಲ್ ( ಸ್ವಲ್ಪ Techniques ಗೊತ್ತಾದರೆ Fake Photoshop! !??). ಆಗ ಜಾತಿಗಳ ಶ್ರೇಷ್ಠತೆ ಈಗ ಸ್ವಲ್ಪ ಶಿಥಿಲತೆ, ಆಗ ಪ್ರಾಮಾಣಿಕತೆ ಈಗ ಭ್ರಷ್ಟತೆ, ಆಗ ಹೆಣ್ಣು ಎರಡನೇ ದರ್ಜೆ ಈಗ ಆಕೆಯೇ ಎಲ್ಲದರಲ್ಲೂ First Class ( ? ), ಆಗ ದೇವರು ದೊಡ್ಡವನು ಈಗ ಹಣ ಅಧಿಕಾರ ಇದ್ದವನೇ ದೇವರು ………….ಹೀಗೆ ನಾನಾ ರೀತಿಯ ಬದಲಾವಣೆಗಳಾಗಿವೆ.

ಆದ್ದರಿಂದ ಅಪ್ಪ ಹಾಕಿದ ಆಲದ ಮರವೆಂದು ನೇಣು ಹಾಕಿಕೊಳ್ಳದೆ, ಚಿನ್ನದ ಸೂಜಿಯೆಂದು ಕಣ್ಣಿಗೆ ಚುಚ್ಚಿಕೊಳ್ಳದೆ ಈಗಿರುವ ನಿಮ್ಮ ಜ್ಞಾನದ ಮಿತಿಯಲ್ಲಿ ಒಂದಷ್ಟು ವಿವೇಚನೆಯಿಂದ ನಿಮಗೆ ಸರಿ ಎಂಬುದನ್ನು ಸ್ವೀಕರಿಸಿ. ಕೆಲವನ್ನು ಬದಲಾವಣೆ ಮಾಡಿಕೊಳ್ಳಿ ಇಷ್ಟವಿಲ್ಲದಿದ್ದರೆ ತಿರಸ್ಕರಿಸಿ.

ಅನುಭವದ ಆಧಾರದ ಮೇಲೆ ಎಲ್ಲಾ ಉತ್ತಮ ಅಂಶಗಳನ್ನು ಸೇರಿಸಿ ಹೊಸ ಸಾಮಾಜಿಕ ಮನೋಸ್ಥಿತಿ ನಿರ್ಮಿಸಿಕೊಳ್ಳೋಣ. ಆ ಕಾರಣಕ್ಕಾಗಿ ಮಹಾತ್ಮರ Quote ಗಳಿಗೆ ನಿಮ್ಮ ಆಂತರಿಕ ಮತ್ತು ಬಾಹ್ಯ ಪ್ರತಿಕ್ರಿಯೆ ಮುಖ್ಯವಾಗುತ್ತದೆ. ಏಕೆಂದರೆ ಈ ಕ್ಷಣದಲ್ಲಿ ನಾವು ಜೀವಿಸುತ್ತಿರುವುದು ನಿಮ್ಮೊಂದಿಗೆ ಹೊರತು ಮಹಾತ್ಮರ ಒಡನಾಟದಲ್ಲಿ ಅಲ್ಲ ಆದರೆ ಅವರ ನೆನಪುಗಳೊದಿಗೆ ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

16 minutes ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

5 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago