Categories: ಲೇಖನ

ಬೆಳಗಿನ ಶುಭೋದಯ ಸಂದೇಶಗಳ ಪ್ರಸ್ತುತತೆ ಮತ್ತು ಅಳವಡಿಕೆ……..

ಸಾಮಾಜಿಕ ಜಾಲತಾಣಗಳಲ್ಲಿ, ಹೆಚ್ಚಾಗಿ ಬೆಳಗಿನ ಹೊತ್ತು ನಮಗೆ ಬರುವ ಬಹುತೇಕ Good Morning Message ಗಳು ಮಹಾನ್ ವ್ಯಕ್ತಿಗಳು ಹೇಳಿರುವ Quotation ಗಳನ್ನು ಒಳಗೊಂಡಿರುತ್ತದೆ.

ಬುದ್ದ, ಬಸವ, ಯೇಸು, ಪೈಗಂಬರ್, ಮಹಾವೀರ, ಅಂಬೇಡ್ಕರ್, ಗಾಂಧಿ, ರೂಮಿ, ಚಾಣಕ್ಯ, ಗಿಬ್ರಾನ್, ಕಾರ್ಲ್ ಮಾರ್ಕ್ಸ್, ಗಾಲಿಬ್, ಸ್ವಾಮಿ ವಿವೇಕಾನಂದ, ಪರಮಹಂಸ, ಸರ್ವಜ್ಞ, ಭಗವದ್ಗೀತೆ, ಆಚಾರ್ಯತ್ರಯರು, ಖುರಾನ್, ಬೈಬಲ್, ಶರಣರು, ದಾಸರು, ಸೂಫಿ ಸಂತರು ಹೀಗೆ ಅನೇಕರ ವಾಣಿಗಳು ನಮಗಿಷ್ಟವಾಗಿವೆ ಎಂದು ಹಾಕುತ್ತೇವೆ.

ಒಂದು ಹಂತಕ್ಕೆ ಇದೆಲ್ಲಾ ಒಳ್ಳೆಯದೆ. ಆದರೆ ಈ ಸಂದೇಶಗಳನ್ನು ಮತ್ತು ಅದನ್ನು ಹೇಳಿರುವವರನ್ನು ನಾವು ಹೇಗೆ ಅರ್ಥಮಾಡಿಕೊಂಡಿದ್ದೇವೆ, ಅದನ್ನು ಹೇಗೆ ಅಳವಡಿಸಿಕೊಂಡಿದ್ದೇವೆ, ಅದರ ಸಾಮಾಜಿಕ ಪ್ರಸ್ತುತತೆ ಏನು ಎಂಬುದನ್ನು ಅದರೊಂದಿಗೆ ಹೇಳಬೇಕಾಗುತ್ತದೆ. ಇಲ್ಲದಿದ್ದರೆ ಅದೊಂದು ಕಾಟಾಚಾರದ ಒಣ ಸಂದೇಶವಾಗುತ್ತದೆ.

ಏಕೆಂದರೆ ಕಾಲದ ನಿರಂತರತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿರುತ್ತವೆ. ಕೆಲವು ಈಗಲೂ ಪ್ರಸ್ತುತವಾದರೆ, ಕೆಲವು ಸವಕಲು ನಾಣ್ಯಗಳು.
ಮತ್ತೆ ಕೆಲವು ಬದಲಾವಣೆಯಾಗಬೇಕಿದ್ದರೆ, ಇನ್ನೊಂದಿಷ್ಟು ಅಪಾಯಕಾರಿಯೂ ಹೌದು.

ಈ ಎಲ್ಲಾ ವ್ಯಕ್ತಿಗಳು ತಾವು ಜೀವಿಸಿದ್ದ ಕಾಲದ ಸ್ಥಿತಿಗತಿಗೆ ಅನುಗುಣವಾಗಿ ಒಂದಷ್ಟು ದೂರದೃಷಿಯಿಂದ ತಮ್ಮ ಚಿಂತನೆಗಳನ್ನು ದಾಖಲಿಸಿರುತ್ತಾರೆ. ಅದು ಈಗ ಎಷ್ಟರ ಮಟ್ಟಿಗೆ ಅಳವಡಿಕೆಗೆ ಯೋಗ್ಯ ಎಂದು ಯೋಚಿಸಬೇಕಾಗುತ್ತದೆ.

ಉದಾಹರಣೆಗೆ ಆಗ ರಾಜಪ್ರಭುತ್ವ ಈಗ ಪ್ರಜಾಪ್ರಭುತ್ವ, ಆಗ ಕಾಲ್ನಡಿಗೆ ಅಥವಾ ಕುದುರೆ.
ಈಗ ವಿಮಾನ, ಆಗ ಪಾರಿವಾಳ ಇಲ್ಲ ಧೂತ ಸಂದೇಶ ವಾಹಕ, ಈಗ ಇಂಟರ್ ನೆಟ್ – ಮೊಬೈಲ್ ( ಸ್ವಲ್ಪ Techniques ಗೊತ್ತಾದರೆ Fake Photoshop! !??). ಆಗ ಜಾತಿಗಳ ಶ್ರೇಷ್ಠತೆ ಈಗ ಸ್ವಲ್ಪ ಶಿಥಿಲತೆ, ಆಗ ಪ್ರಾಮಾಣಿಕತೆ ಈಗ ಭ್ರಷ್ಟತೆ, ಆಗ ಹೆಣ್ಣು ಎರಡನೇ ದರ್ಜೆ ಈಗ ಆಕೆಯೇ ಎಲ್ಲದರಲ್ಲೂ First Class ( ? ), ಆಗ ದೇವರು ದೊಡ್ಡವನು ಈಗ ಹಣ ಅಧಿಕಾರ ಇದ್ದವನೇ ದೇವರು ………….ಹೀಗೆ ನಾನಾ ರೀತಿಯ ಬದಲಾವಣೆಗಳಾಗಿವೆ.

ಆದ್ದರಿಂದ ಅಪ್ಪ ಹಾಕಿದ ಆಲದ ಮರವೆಂದು ನೇಣು ಹಾಕಿಕೊಳ್ಳದೆ, ಚಿನ್ನದ ಸೂಜಿಯೆಂದು ಕಣ್ಣಿಗೆ ಚುಚ್ಚಿಕೊಳ್ಳದೆ ಈಗಿರುವ ನಿಮ್ಮ ಜ್ಞಾನದ ಮಿತಿಯಲ್ಲಿ ಒಂದಷ್ಟು ವಿವೇಚನೆಯಿಂದ ನಿಮಗೆ ಸರಿ ಎಂಬುದನ್ನು ಸ್ವೀಕರಿಸಿ. ಕೆಲವನ್ನು ಬದಲಾವಣೆ ಮಾಡಿಕೊಳ್ಳಿ ಇಷ್ಟವಿಲ್ಲದಿದ್ದರೆ ತಿರಸ್ಕರಿಸಿ.

ಅನುಭವದ ಆಧಾರದ ಮೇಲೆ ಎಲ್ಲಾ ಉತ್ತಮ ಅಂಶಗಳನ್ನು ಸೇರಿಸಿ ಹೊಸ ಸಾಮಾಜಿಕ ಮನೋಸ್ಥಿತಿ ನಿರ್ಮಿಸಿಕೊಳ್ಳೋಣ. ಆ ಕಾರಣಕ್ಕಾಗಿ ಮಹಾತ್ಮರ Quote ಗಳಿಗೆ ನಿಮ್ಮ ಆಂತರಿಕ ಮತ್ತು ಬಾಹ್ಯ ಪ್ರತಿಕ್ರಿಯೆ ಮುಖ್ಯವಾಗುತ್ತದೆ. ಏಕೆಂದರೆ ಈ ಕ್ಷಣದಲ್ಲಿ ನಾವು ಜೀವಿಸುತ್ತಿರುವುದು ನಿಮ್ಮೊಂದಿಗೆ ಹೊರತು ಮಹಾತ್ಮರ ಒಡನಾಟದಲ್ಲಿ ಅಲ್ಲ ಆದರೆ ಅವರ ನೆನಪುಗಳೊದಿಗೆ ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

4 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

4 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

10 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

18 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago