Categories: ಲೇಖನ

ಬೆಳಗಿನ ಶುಭೋದಯ ಸಂದೇಶಗಳ ಪ್ರಸ್ತುತತೆ ಮತ್ತು ಅಳವಡಿಕೆ……..

ಸಾಮಾಜಿಕ ಜಾಲತಾಣಗಳಲ್ಲಿ, ಹೆಚ್ಚಾಗಿ ಬೆಳಗಿನ ಹೊತ್ತು ನಮಗೆ ಬರುವ ಬಹುತೇಕ Good Morning Message ಗಳು ಮಹಾನ್ ವ್ಯಕ್ತಿಗಳು ಹೇಳಿರುವ Quotation ಗಳನ್ನು ಒಳಗೊಂಡಿರುತ್ತದೆ.

ಬುದ್ದ, ಬಸವ, ಯೇಸು, ಪೈಗಂಬರ್, ಮಹಾವೀರ, ಅಂಬೇಡ್ಕರ್, ಗಾಂಧಿ, ರೂಮಿ, ಚಾಣಕ್ಯ, ಗಿಬ್ರಾನ್, ಕಾರ್ಲ್ ಮಾರ್ಕ್ಸ್, ಗಾಲಿಬ್, ಸ್ವಾಮಿ ವಿವೇಕಾನಂದ, ಪರಮಹಂಸ, ಸರ್ವಜ್ಞ, ಭಗವದ್ಗೀತೆ, ಆಚಾರ್ಯತ್ರಯರು, ಖುರಾನ್, ಬೈಬಲ್, ಶರಣರು, ದಾಸರು, ಸೂಫಿ ಸಂತರು ಹೀಗೆ ಅನೇಕರ ವಾಣಿಗಳು ನಮಗಿಷ್ಟವಾಗಿವೆ ಎಂದು ಹಾಕುತ್ತೇವೆ.

ಒಂದು ಹಂತಕ್ಕೆ ಇದೆಲ್ಲಾ ಒಳ್ಳೆಯದೆ. ಆದರೆ ಈ ಸಂದೇಶಗಳನ್ನು ಮತ್ತು ಅದನ್ನು ಹೇಳಿರುವವರನ್ನು ನಾವು ಹೇಗೆ ಅರ್ಥಮಾಡಿಕೊಂಡಿದ್ದೇವೆ, ಅದನ್ನು ಹೇಗೆ ಅಳವಡಿಸಿಕೊಂಡಿದ್ದೇವೆ, ಅದರ ಸಾಮಾಜಿಕ ಪ್ರಸ್ತುತತೆ ಏನು ಎಂಬುದನ್ನು ಅದರೊಂದಿಗೆ ಹೇಳಬೇಕಾಗುತ್ತದೆ. ಇಲ್ಲದಿದ್ದರೆ ಅದೊಂದು ಕಾಟಾಚಾರದ ಒಣ ಸಂದೇಶವಾಗುತ್ತದೆ.

ಏಕೆಂದರೆ ಕಾಲದ ನಿರಂತರತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿರುತ್ತವೆ. ಕೆಲವು ಈಗಲೂ ಪ್ರಸ್ತುತವಾದರೆ, ಕೆಲವು ಸವಕಲು ನಾಣ್ಯಗಳು.
ಮತ್ತೆ ಕೆಲವು ಬದಲಾವಣೆಯಾಗಬೇಕಿದ್ದರೆ, ಇನ್ನೊಂದಿಷ್ಟು ಅಪಾಯಕಾರಿಯೂ ಹೌದು.

ಈ ಎಲ್ಲಾ ವ್ಯಕ್ತಿಗಳು ತಾವು ಜೀವಿಸಿದ್ದ ಕಾಲದ ಸ್ಥಿತಿಗತಿಗೆ ಅನುಗುಣವಾಗಿ ಒಂದಷ್ಟು ದೂರದೃಷಿಯಿಂದ ತಮ್ಮ ಚಿಂತನೆಗಳನ್ನು ದಾಖಲಿಸಿರುತ್ತಾರೆ. ಅದು ಈಗ ಎಷ್ಟರ ಮಟ್ಟಿಗೆ ಅಳವಡಿಕೆಗೆ ಯೋಗ್ಯ ಎಂದು ಯೋಚಿಸಬೇಕಾಗುತ್ತದೆ.

ಉದಾಹರಣೆಗೆ ಆಗ ರಾಜಪ್ರಭುತ್ವ ಈಗ ಪ್ರಜಾಪ್ರಭುತ್ವ, ಆಗ ಕಾಲ್ನಡಿಗೆ ಅಥವಾ ಕುದುರೆ.
ಈಗ ವಿಮಾನ, ಆಗ ಪಾರಿವಾಳ ಇಲ್ಲ ಧೂತ ಸಂದೇಶ ವಾಹಕ, ಈಗ ಇಂಟರ್ ನೆಟ್ – ಮೊಬೈಲ್ ( ಸ್ವಲ್ಪ Techniques ಗೊತ್ತಾದರೆ Fake Photoshop! !??). ಆಗ ಜಾತಿಗಳ ಶ್ರೇಷ್ಠತೆ ಈಗ ಸ್ವಲ್ಪ ಶಿಥಿಲತೆ, ಆಗ ಪ್ರಾಮಾಣಿಕತೆ ಈಗ ಭ್ರಷ್ಟತೆ, ಆಗ ಹೆಣ್ಣು ಎರಡನೇ ದರ್ಜೆ ಈಗ ಆಕೆಯೇ ಎಲ್ಲದರಲ್ಲೂ First Class ( ? ), ಆಗ ದೇವರು ದೊಡ್ಡವನು ಈಗ ಹಣ ಅಧಿಕಾರ ಇದ್ದವನೇ ದೇವರು ………….ಹೀಗೆ ನಾನಾ ರೀತಿಯ ಬದಲಾವಣೆಗಳಾಗಿವೆ.

ಆದ್ದರಿಂದ ಅಪ್ಪ ಹಾಕಿದ ಆಲದ ಮರವೆಂದು ನೇಣು ಹಾಕಿಕೊಳ್ಳದೆ, ಚಿನ್ನದ ಸೂಜಿಯೆಂದು ಕಣ್ಣಿಗೆ ಚುಚ್ಚಿಕೊಳ್ಳದೆ ಈಗಿರುವ ನಿಮ್ಮ ಜ್ಞಾನದ ಮಿತಿಯಲ್ಲಿ ಒಂದಷ್ಟು ವಿವೇಚನೆಯಿಂದ ನಿಮಗೆ ಸರಿ ಎಂಬುದನ್ನು ಸ್ವೀಕರಿಸಿ. ಕೆಲವನ್ನು ಬದಲಾವಣೆ ಮಾಡಿಕೊಳ್ಳಿ ಇಷ್ಟವಿಲ್ಲದಿದ್ದರೆ ತಿರಸ್ಕರಿಸಿ.

ಅನುಭವದ ಆಧಾರದ ಮೇಲೆ ಎಲ್ಲಾ ಉತ್ತಮ ಅಂಶಗಳನ್ನು ಸೇರಿಸಿ ಹೊಸ ಸಾಮಾಜಿಕ ಮನೋಸ್ಥಿತಿ ನಿರ್ಮಿಸಿಕೊಳ್ಳೋಣ. ಆ ಕಾರಣಕ್ಕಾಗಿ ಮಹಾತ್ಮರ Quote ಗಳಿಗೆ ನಿಮ್ಮ ಆಂತರಿಕ ಮತ್ತು ಬಾಹ್ಯ ಪ್ರತಿಕ್ರಿಯೆ ಮುಖ್ಯವಾಗುತ್ತದೆ. ಏಕೆಂದರೆ ಈ ಕ್ಷಣದಲ್ಲಿ ನಾವು ಜೀವಿಸುತ್ತಿರುವುದು ನಿಮ್ಮೊಂದಿಗೆ ಹೊರತು ಮಹಾತ್ಮರ ಒಡನಾಟದಲ್ಲಿ ಅಲ್ಲ ಆದರೆ ಅವರ ನೆನಪುಗಳೊದಿಗೆ ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago