ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,
ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,
ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,
ಹೊಸ ಸವಾಲುಗಳು ನಮ್ಮ ಮುಂದಿವೆ……….
ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,
ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,
ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,
ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,
ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,
ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,
ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,
ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,
ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,
ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,
ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,
ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,
ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,
ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,
ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,
ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,
ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,
ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,
ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,
ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,
ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………
ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ….
ಎಲ್ಲರಿಗೂ ಒಳ್ಳೆಯದಾಗಲಿ….,
ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…