Categories: ಲೇಖನ

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ…

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,

ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,

ಹೊಸ ಸವಾಲುಗಳು ನಮ್ಮ ಮುಂದಿವೆ……….

ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,

ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,

ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,

ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,

ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,

ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,

ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,

ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,

ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,

ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,

ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,

ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,

ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,

ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,

ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,

ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,

ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,

ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,

ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,

ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,

ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………

ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ…. ‌

ಎಲ್ಲರಿಗೂ ಒಳ್ಳೆಯದಾಗಲಿ….,

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

1 hour ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago