Categories: ಲೇಖನ

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ…

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,

ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,

ಹೊಸ ಸವಾಲುಗಳು ನಮ್ಮ ಮುಂದಿವೆ……….

ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,

ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,

ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,

ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,

ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,

ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,

ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,

ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,

ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,

ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,

ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,

ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,

ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,

ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,

ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,

ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,

ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,

ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,

ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,

ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,

ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………

ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ…. ‌

ಎಲ್ಲರಿಗೂ ಒಳ್ಳೆಯದಾಗಲಿ….,

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago