Categories: ಲೇಖನ

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ…

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,

ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,

ಹೊಸ ಸವಾಲುಗಳು ನಮ್ಮ ಮುಂದಿವೆ……….

ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,

ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,

ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,

ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,

ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,

ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,

ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,

ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,

ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,

ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,

ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,

ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,

ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,

ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,

ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,

ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,

ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,

ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,

ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,

ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,

ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………

ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ…. ‌

ಎಲ್ಲರಿಗೂ ಒಳ್ಳೆಯದಾಗಲಿ….,

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago