Categories: ಲೇಖನ

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ…

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,

ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,

ಹೊಸ ಸವಾಲುಗಳು ನಮ್ಮ ಮುಂದಿವೆ……….

ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,

ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,

ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,

ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,

ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,

ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,

ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,

ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,

ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,

ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,

ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,

ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,

ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,

ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,

ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,

ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,

ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,

ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,

ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,

ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,

ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………

ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ…. ‌

ಎಲ್ಲರಿಗೂ ಒಳ್ಳೆಯದಾಗಲಿ….,

ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

24 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago