ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,
ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,
ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,
ಹೊಸ ಸವಾಲುಗಳು ನಮ್ಮ ಮುಂದಿವೆ……….
ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,
ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,
ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,
ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,
ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,
ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,
ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,
ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,
ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,
ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,
ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,
ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,
ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,
ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,
ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,
ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,
ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,
ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,
ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,
ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,
ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………
ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ….
ಎಲ್ಲರಿಗೂ ಒಳ್ಳೆಯದಾಗಲಿ….,
ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…