ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,
ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ…….,
ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ…….,
ಹೊಸ ಸವಾಲುಗಳು ನಮ್ಮ ಮುಂದಿವೆ……….
ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ…..,
ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……,
ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……,
ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ…..,
ಅನುಭವದ ಸಂದೇಶಗಳು ಅರ್ಥವಾಗಬೇಕಿದೆ…..,
ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ…….,
ಹಿರಿಯರು ಗುರುಗಳು ಚಿಂತಕರ ಮಾತುಗಳು ದಾರಿ ದೀಪವಾಗಬೇಕಿದೆ……,
ನಮ್ಮೆಲ್ಲರ ಸಾಮರ್ಥ್ಯ ಈಗ ಹೊರ ಬರ ಬೇಕಾಗಿದೆ…..,
ನಮ್ಮೊಳಗೆ ಅಡಗಿರುವ ಎಲ್ಲಾ ಧೈರ್ಯವನ್ನು ಒಟ್ಟುಗೂಡಿಸಿ ಕೊಳ್ಳೋಣ…….,
ಮಾನಸಿಕ ಏಕಾಗ್ರತೆಯನ್ನು ಗಟ್ಟಿಗೊಳಿಸಿಕೊಳ್ಳೋಣ…..,
ಕಣ್ಣ ಮುಂದಿನ ಕಷ್ಟ, ನೋವು ಸಾವುಗಳಿಗೆ ವಿಚಲಿತರಾಗದಿರೋಣ……,
ಏಕೆಂದರೆ ಈಗ ಹೆಚ್ಚು ಕಡಿಮೆ ದೂರದ ಸುದ್ದಿಗಳು ಹತ್ತಿರವಾಗುತ್ತಿವೆ…….,
ಮಾಧ್ಯಮಗಳು ಇನ್ನಷ್ಟು ಭಯ ಸೃಷ್ಟಿಸುತ್ತಿವೆ………..,
ಮೌನ ಮತ್ತು ಏಕಾಂತ ಮಗದಷ್ಟು ಅಸಹನೀಯತೆ ಉಂಟುಮಾಡುತ್ತದೆ…….,
ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕಿದೆ…….,
ಎಲ್ಲವನ್ನೂ ಒಳಗೊಂಡ ಸಮಗ್ರ ಮತ್ತು ವಿಶಾಲ ಮನಸ್ಥಿತಿ ಬೆಳೆಸಿಕೊಳ್ಳಬೇಕಿದೆ……..,
ಸ್ಥಿತಪ್ರಜ್ಞತೆ ಮೈಗೂಡಿಸಿಕೊಳ್ಳಬೇಕಿದೆ…..,
ದುರಂತ ಸುದ್ದಿಗಳನ್ನು ಕೇಳಿಯೂ ಒಳ್ಳೆಯ ಸುದ್ದಿಗಳ ಭರವಸೆಯನ್ನು ಕಲ್ಪಿಸಿಕೊಳ್ಳಬೇಕಿದೆ…….,
ಅನಿರೀಕ್ಷಿತ ಘಟನೆಗಳು ಸಹ ನಿರೀಕ್ಷಿತವೇ ಎಂದು ಭಾವಿಸಿ ಮುಂದಿನ ಜವಾಬ್ದಾರಿ ನಿರ್ವಹಿಸಬೇಕಿದೆ…….,
ಎಲ್ಲೆಲ್ಲೂ ದುಗುಡ ತುಂಬಿದ ಮಾತು ಚರ್ಚೆ ಮನಸ್ಸುಗಳೇ ತುಂಬಿರುವಾಗ ನಾವು ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ಯೋಚಿಸಬೇಕಾಗಿದೆ…….,
ಬದುಕಿರುವುದೇ ಒಂದು ಸಾಧನೆ ಎಂದು ಭಾವಿಸಿ ನಮ್ಮನ್ನು ನಾವು ಉಳಿಸಿಕೊಳ್ಳುವ, ಇತರರನ್ನು ಉಳಿಸುವ, ಪ್ರೇರೇಪಿಸುವ, ಆತ್ಮವಿಶ್ವಾಸ ತುಂಬುವ,
ಮನದ ಕಲ್ಮಶಗಳನ್ನು ಅಳಿಸಿ ಹಾಕುವ, ಮಾನವೀಯ ಮೌಲ್ಯಗಳನ್ನು ಮೆಲುಕು ಹಾಕುವ, ಒಳ್ಳೆಯತನವನ್ನು ಬೆಳೆಸುವ, ಕೆಟ್ಟ ಪರಿಸ್ಥಿತಿಯನ್ನು ಒಳ್ಳೆಯ ಸಮಯವಾಗಿ ಪರಿವರ್ತಿಸುವ ಎಲ್ಲಾ ಪ್ರಯತ್ನ ಮಾಡೋಣ………
ನಮ್ಮನ್ನು ನಾವು ಪುನರ್ ಪ್ರತಿಷ್ಟಾಪಿಸಿಕೊಳ್ಳುವ ಆಶಯದೊಂದಿಗೆ….
ಎಲ್ಲರಿಗೂ ಒಳ್ಳೆಯದಾಗಲಿ….,
ಬೆಳಗಿನ ಸೂರ್ಯ ಕಿರಣಗಳು ನಿಮ್ಮ ಮನಸ್ಸನ್ನು ಚೇತೋಹಾರಿಯಾಗಿ ಮಾಡಲಿ ಎಂದು ಆಶಿಸುತ್ತಾ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…