ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್ ಮಾತನಾಡಿ, ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರಗಳ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ರಸಗೊಬ್ಬರಗಳ ಬಳಕೆಗೆ ತಗಲುವ ವೆಚ್ಚವೂ ಅಧಿಕವಾಗುತ್ತದೆ. ಕೇವಲ ಯೂರಿಯಾದಂತಹ ಸಾರಜನಕ ಯುಕ್ತ ಗೊಬ್ಬರಗಳ ಮೇಲೆ ಅವಲಂಬಿತವಾಗದೆ, ಮಣ್ಣು ಪರೀಕ್ಷೆ ಆಧಾರದ ಮೇಲೆ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಒಳಗೊಂಡಂತೆ ಲಘು ಪೋಷಕಾಂಶಗಳನ್ನು ಸರಿಯಾದ ಪ್ರಮಾಣದಲ್ಲಿ ನೀಡಬೇಕೆಂದು ತಿಳಿಸಿದರು.

ಸಮತೋಲಿತ ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ದೀರ್ಘಕಾಲದವರೆಗೆ ಉಳಿಯುತ್ತದೆ. ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆ ಕಡಿಮೆಯಾಗುತ್ತದೆ, ಗೊಬ್ಬರದ ಮೇಲಿನ ಅನಗತ್ಯ ಖರ್ಚು ಉಳಿತಾಯವಾಗುತ್ತದೆ ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದೆಂದು ತಿಳಿಸಿಕೊಟ್ಟರು.

ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ವಿಧಾನಗಳನ್ನು ತಿಳಿಸಿಕೊಡುವುದರ ಜೊತೆಗೆ, ಪ್ರತಿ ಅಡಿಕೆ ಗಿಡಕ್ಕೆ ವರ್ಷಕ್ಕೊಂದು ಬಾರಿ 6 ಕೆ.ಜಿ. ಕೊಟ್ಟಿಗೆ ಗೊಬ್ಬರ ಹಾಗೂ ಪ್ರತಿ ಎಕರೆಗೆ 5 ಕೆ.ಜಿ. ಬೊರಾಕ್ಸ್, 12 ಕೆ.ಜಿ. ಹಸಿರೆಲೆ ಗೊಬ್ಬರದ ಬೀಜಗಳನ್ನು ಬಳಸುವುದರಿಂದ ಕಾಯಿಯ ಸೀಳುವಿಕೆ ಕಡಿಮೆಯಾಗುವುದರ ಜೊತೆಗೆ ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶ ಹೆಚ್ಚಾಗುತ್ತದೆ ಎಂದರು.

 ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗೀತಾ, ಕೃಷಿ ಇಲಾಖೆಯಲ್ಲಿ ದೊರೆಯುವ ಪ್ರಮಾಣಿತ ರಸಗೊಬ್ಬರಗಳ ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಜೇನುಕೃಷಿ ವಿಭಾಗದ ವಿಜ್ಞಾನಿಗಳಾದ ಡಾ. ಜಿ. ಈಶ್ವರಪ್ಪ, ಅಡಿಕೆ ಬೆಳೆಗೆ ತಗಲುವ ಕೀಟ ಮತ್ತು ರೋಗಗಳು ಹಾಗೂ ಅವುಗಳ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ಈ ಅಭಿಯಾನದಲ್ಲಿ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಜಗದೀಶ್‌, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಿನಿ, ಪ್ರಗತಿ ಪರ ರೈತರಾದ ನಾರಾಯಣಪ್ಪ ಹಾಗೂ ಆಂಜಿನಪ್ಪ ಹಾಗೂ ಇತರೆ ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

12 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

16 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

17 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

24 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago