ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್ ಮಾತನಾಡಿ, ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರಗಳ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ರಸಗೊಬ್ಬರಗಳ ಬಳಕೆಗೆ ತಗಲುವ ವೆಚ್ಚವೂ ಅಧಿಕವಾಗುತ್ತದೆ. ಕೇವಲ ಯೂರಿಯಾದಂತಹ ಸಾರಜನಕ ಯುಕ್ತ ಗೊಬ್ಬರಗಳ ಮೇಲೆ ಅವಲಂಬಿತವಾಗದೆ, ಮಣ್ಣು ಪರೀಕ್ಷೆ ಆಧಾರದ ಮೇಲೆ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಒಳಗೊಂಡಂತೆ ಲಘು ಪೋಷಕಾಂಶಗಳನ್ನು ಸರಿಯಾದ ಪ್ರಮಾಣದಲ್ಲಿ ನೀಡಬೇಕೆಂದು ತಿಳಿಸಿದರು.

ಸಮತೋಲಿತ ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ದೀರ್ಘಕಾಲದವರೆಗೆ ಉಳಿಯುತ್ತದೆ. ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆ ಕಡಿಮೆಯಾಗುತ್ತದೆ, ಗೊಬ್ಬರದ ಮೇಲಿನ ಅನಗತ್ಯ ಖರ್ಚು ಉಳಿತಾಯವಾಗುತ್ತದೆ ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದೆಂದು ತಿಳಿಸಿಕೊಟ್ಟರು.

ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ವಿಧಾನಗಳನ್ನು ತಿಳಿಸಿಕೊಡುವುದರ ಜೊತೆಗೆ, ಪ್ರತಿ ಅಡಿಕೆ ಗಿಡಕ್ಕೆ ವರ್ಷಕ್ಕೊಂದು ಬಾರಿ 6 ಕೆ.ಜಿ. ಕೊಟ್ಟಿಗೆ ಗೊಬ್ಬರ ಹಾಗೂ ಪ್ರತಿ ಎಕರೆಗೆ 5 ಕೆ.ಜಿ. ಬೊರಾಕ್ಸ್, 12 ಕೆ.ಜಿ. ಹಸಿರೆಲೆ ಗೊಬ್ಬರದ ಬೀಜಗಳನ್ನು ಬಳಸುವುದರಿಂದ ಕಾಯಿಯ ಸೀಳುವಿಕೆ ಕಡಿಮೆಯಾಗುವುದರ ಜೊತೆಗೆ ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶ ಹೆಚ್ಚಾಗುತ್ತದೆ ಎಂದರು.

 ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗೀತಾ, ಕೃಷಿ ಇಲಾಖೆಯಲ್ಲಿ ದೊರೆಯುವ ಪ್ರಮಾಣಿತ ರಸಗೊಬ್ಬರಗಳ ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಜೇನುಕೃಷಿ ವಿಭಾಗದ ವಿಜ್ಞಾನಿಗಳಾದ ಡಾ. ಜಿ. ಈಶ್ವರಪ್ಪ, ಅಡಿಕೆ ಬೆಳೆಗೆ ತಗಲುವ ಕೀಟ ಮತ್ತು ರೋಗಗಳು ಹಾಗೂ ಅವುಗಳ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ಈ ಅಭಿಯಾನದಲ್ಲಿ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಜಗದೀಶ್‌, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಿನಿ, ಪ್ರಗತಿ ಪರ ರೈತರಾದ ನಾರಾಯಣಪ್ಪ ಹಾಗೂ ಆಂಜಿನಪ್ಪ ಹಾಗೂ ಇತರೆ ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

18 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago