ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್ ಮಾತನಾಡಿ, ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರಗಳ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ರಸಗೊಬ್ಬರಗಳ ಬಳಕೆಗೆ ತಗಲುವ ವೆಚ್ಚವೂ ಅಧಿಕವಾಗುತ್ತದೆ. ಕೇವಲ ಯೂರಿಯಾದಂತಹ ಸಾರಜನಕ ಯುಕ್ತ ಗೊಬ್ಬರಗಳ ಮೇಲೆ ಅವಲಂಬಿತವಾಗದೆ, ಮಣ್ಣು ಪರೀಕ್ಷೆ ಆಧಾರದ ಮೇಲೆ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಒಳಗೊಂಡಂತೆ ಲಘು ಪೋಷಕಾಂಶಗಳನ್ನು ಸರಿಯಾದ ಪ್ರಮಾಣದಲ್ಲಿ ನೀಡಬೇಕೆಂದು ತಿಳಿಸಿದರು.

ಸಮತೋಲಿತ ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ದೀರ್ಘಕಾಲದವರೆಗೆ ಉಳಿಯುತ್ತದೆ. ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆ ಕಡಿಮೆಯಾಗುತ್ತದೆ, ಗೊಬ್ಬರದ ಮೇಲಿನ ಅನಗತ್ಯ ಖರ್ಚು ಉಳಿತಾಯವಾಗುತ್ತದೆ ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದೆಂದು ತಿಳಿಸಿಕೊಟ್ಟರು.

ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ವಿಧಾನಗಳನ್ನು ತಿಳಿಸಿಕೊಡುವುದರ ಜೊತೆಗೆ, ಪ್ರತಿ ಅಡಿಕೆ ಗಿಡಕ್ಕೆ ವರ್ಷಕ್ಕೊಂದು ಬಾರಿ 6 ಕೆ.ಜಿ. ಕೊಟ್ಟಿಗೆ ಗೊಬ್ಬರ ಹಾಗೂ ಪ್ರತಿ ಎಕರೆಗೆ 5 ಕೆ.ಜಿ. ಬೊರಾಕ್ಸ್, 12 ಕೆ.ಜಿ. ಹಸಿರೆಲೆ ಗೊಬ್ಬರದ ಬೀಜಗಳನ್ನು ಬಳಸುವುದರಿಂದ ಕಾಯಿಯ ಸೀಳುವಿಕೆ ಕಡಿಮೆಯಾಗುವುದರ ಜೊತೆಗೆ ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶ ಹೆಚ್ಚಾಗುತ್ತದೆ ಎಂದರು.

 ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗೀತಾ, ಕೃಷಿ ಇಲಾಖೆಯಲ್ಲಿ ದೊರೆಯುವ ಪ್ರಮಾಣಿತ ರಸಗೊಬ್ಬರಗಳ ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಜೇನುಕೃಷಿ ವಿಭಾಗದ ವಿಜ್ಞಾನಿಗಳಾದ ಡಾ. ಜಿ. ಈಶ್ವರಪ್ಪ, ಅಡಿಕೆ ಬೆಳೆಗೆ ತಗಲುವ ಕೀಟ ಮತ್ತು ರೋಗಗಳು ಹಾಗೂ ಅವುಗಳ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ಈ ಅಭಿಯಾನದಲ್ಲಿ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಜಗದೀಶ್‌, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಿನಿ, ಪ್ರಗತಿ ಪರ ರೈತರಾದ ನಾರಾಯಣಪ್ಪ ಹಾಗೂ ಆಂಜಿನಪ್ಪ ಹಾಗೂ ಇತರೆ ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

1 hour ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago