ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…