ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…