ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…