ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…