ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…