ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…