ದೊಡ್ಡಬಳ್ಳಾಪುರ: ಬೆಳೆಗಳಿಗೆ ದೃಷ್ಠಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಹೋಗಿರುವ ಮಣ್ಣಿನ ಕರಿ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ರೈತರು ತಮ್ಮ ಹೊಲದಲ್ಲಿಯೇ ದೊರೆಯುವ ಕೋಲುಗಳಿಗೆ ಹಳೇ ಬಟ್ಟೆ ಸುತ್ತಿ ಬೆದರು ಬೊಂಬೆಗಳನ್ನು ನಿಲ್ಲಿಸುತ್ತಿದ್ದರು.
ಆದರೆ, ಇದೀಗ ಮಣ್ಣಿನ ಕರಿ ಮಡಿಕೆಗಳು ಕಣ್ಮರೆಯಾಗಿರುವ ಈ ದಿನಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ದೃಷ್ಠಿ ತಾಕದಂತೆ ತಡೆಯಲು ರೈತರು ಹೈಟೆಕ್ ವಿಧಾನ ಕಂಡುಕೊಂಡಿದ್ದಾರೆ.
ವಿವಿಧ ಸಿನಿಮಾ ಮೋಹಕ ತಾರೆಯರ ಹಾಗೂ ಇತ್ತೀಚೆಗೆ ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಜನಪ್ರಿಯ ದೃಷ್ಠಿ ಬೊಂಬೆಯಾಗಿ ಬಳಸುತ್ತಿರುವ ದಪ್ಪ ಕಣ್ಣು ಗುಡ್ಡೆ ಹೊಂದಿದ ಮಹಿಳೆಯ ಮುಖದ ಭಾವ ಚಿತ್ರದ ಫ್ಲೆಕ್ಸ್ ಗಳನ್ನು ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ಇದೇ ರೀತಿ ತಾಲೂಕಿನ ಉಜ್ಜನಿ ಹಾಗೂ ಹೊಸಹಳ್ಳಿ ಕೆಲ ರೈತರು ತಮ್ಮ ಬೆಳೆಗಳಿಗೆ ದೃಷ್ಠಿ ತಾಕದಂತೆ ಬೆಳೆಗಳ ಮಧ್ಯೆ ಮೋಹಕ ತಾರೆಯರ ಭಾವಚಿತ್ರಗಳನ್ನು ಅಳವಡಿಸಿರುವ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕು ಮುನ್ನವೇ ಥಟ್ಟನೆ ಕಣ್ಣಿಗೆ ಬೀಳುತ್ತಿರುವುದೇ ಈ ಸಿನಿಮಾದ ಮೋಹಕ ತಾರೆಯರ ಭಾವಚಿತ್ರಗಳು.
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…