ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನೆಲೆ ಯುವ ರೈತ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ಯುವ ರೈತ ಪವನ್ ಕುಮಾ‌ರ್ (22) ಆತ್ಮಹತ್ಯೆಗೆ ಶರಣಾದವನು.

ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಪವನ್ ಕುಮಾ‌ರ್ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಯುವಕ ಮೂರು ವರ್ಷಗಳಿಂದ ವ್ಯವಸಾಯದಲ್ಲಿ ತಂದೆಗೆ ಸಹಾಯ ಮಾಡಿಕೊಂಡಿದ್ದ. ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನಲೇ ಮನನೊಂದಿದ್ದ, ಬ್ಯಾಂಕ್ ಹಾಗೂ ಸಂಬಂಧಿಕರ ಬಳಿ ಸಾಲ ಮಾಡಿದ್ದ ಎನ್ನಲಾಗಿದೆ.

ಸಾಲ ಮಾಡಿ ಉಳುಮೆ ಮಾಡುತ್ತಿದ್ದ ಯುವ ರೈತ ಬೆಳಗೆ ಉತ್ತಮ ಬೆಲೆ ಸಿಗದೇ ಕಂಗಾಲಾಗಿದ್ದ. ಶ್ರಮಕ್ಕೆ ಫಲ ದೊರೆಯದೇ ಬೇಸತ್ತ ಪವನ್‌ಕುಮಾ‌ರ್ ತನ್ನ ಜಮೀನಿನಲ್ಲೇ ಮರಕ್ಕೆ ನೇಣುಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Leave a Reply

Your email address will not be published. Required fields are marked *