ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ಯುವ ರೈತ ಪವನ್ ಕುಮಾರ್ (22) ಆತ್ಮಹತ್ಯೆಗೆ ಶರಣಾದವನು.
ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಪವನ್ ಕುಮಾರ್ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಯುವಕ ಮೂರು ವರ್ಷಗಳಿಂದ ವ್ಯವಸಾಯದಲ್ಲಿ ತಂದೆಗೆ ಸಹಾಯ ಮಾಡಿಕೊಂಡಿದ್ದ. ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನಲೇ ಮನನೊಂದಿದ್ದ, ಬ್ಯಾಂಕ್ ಹಾಗೂ ಸಂಬಂಧಿಕರ ಬಳಿ ಸಾಲ ಮಾಡಿದ್ದ ಎನ್ನಲಾಗಿದೆ.
ಸಾಲ ಮಾಡಿ ಉಳುಮೆ ಮಾಡುತ್ತಿದ್ದ ಯುವ ರೈತ ಬೆಳಗೆ ಉತ್ತಮ ಬೆಲೆ ಸಿಗದೇ ಕಂಗಾಲಾಗಿದ್ದ. ಶ್ರಮಕ್ಕೆ ಫಲ ದೊರೆಯದೇ ಬೇಸತ್ತ ಪವನ್ಕುಮಾರ್ ತನ್ನ ಜಮೀನಿನಲ್ಲೇ ಮರಕ್ಕೆ ನೇಣುಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…