ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ಯುವ ರೈತ ಪವನ್ ಕುಮಾರ್ (22) ಆತ್ಮಹತ್ಯೆಗೆ ಶರಣಾದವನು.
ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಪವನ್ ಕುಮಾರ್ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಯುವಕ ಮೂರು ವರ್ಷಗಳಿಂದ ವ್ಯವಸಾಯದಲ್ಲಿ ತಂದೆಗೆ ಸಹಾಯ ಮಾಡಿಕೊಂಡಿದ್ದ. ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನಲೇ ಮನನೊಂದಿದ್ದ, ಬ್ಯಾಂಕ್ ಹಾಗೂ ಸಂಬಂಧಿಕರ ಬಳಿ ಸಾಲ ಮಾಡಿದ್ದ ಎನ್ನಲಾಗಿದೆ.
ಸಾಲ ಮಾಡಿ ಉಳುಮೆ ಮಾಡುತ್ತಿದ್ದ ಯುವ ರೈತ ಬೆಳಗೆ ಉತ್ತಮ ಬೆಲೆ ಸಿಗದೇ ಕಂಗಾಲಾಗಿದ್ದ. ಶ್ರಮಕ್ಕೆ ಫಲ ದೊರೆಯದೇ ಬೇಸತ್ತ ಪವನ್ಕುಮಾರ್ ತನ್ನ ಜಮೀನಿನಲ್ಲೇ ಮರಕ್ಕೆ ನೇಣುಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…