ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…