ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…