ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…