ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…