ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…