ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಯಿ ನೀಲಮ್ಮ, ಮಗ ಹರೀಶ್ ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ. ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ. ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ. ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ. ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ. ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.
ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…