ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರಪರಿಸ್ಥಿತಿ ಸಂಬಂಧ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿದರು.

ಜಿಲ್ಲೆಯಲ್ಲಿ ಇದುವರೆಗೆ ದಾಖಲಾಗಿರುವ ಮಳೆಯ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆಯ ಸ್ಥಿತಿ ಹಾಗೂ ಮುಂಗಾರು ಹಂಗಾಮಿನ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಕೃಷಿ ಇಲಾಖೆಯ ವತಿಯಿಂದ ಮುಂಗಾರು ಬಿತ್ತನೆ ಪ್ರಗತಿ, ಬೆಳೆಗಳ ಪ್ರಗತಿ, ಬೆಳೆಗಳ ಸ್ಥಿತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ, ಬೆಳೆಹಾನಿ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಯಿತು.

ಈಗಾಗಲೇ ಹಲವು ಭಾಗಗಳಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದು ಮಳೆ ಕೊರತೆಯಿಂದ ರಾಗಿ ಬೆಳೆದಿಲ್ಲ. ಅಧಿಕಾರಿಗಳು ರೈತರ ಮನವೊಲಿಸಿ ಬೆಳೆ ವಿಮೆಗೆ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು. ಯಾವೊಬ್ಬ ರೈತ ಕೂಡ ಬೆಳೆ ವಿಮೆ ವಂಚಿತರಾಗಬಾರದು. ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ, ಮಳೆ ಅಭಾವ ಸೃಷ್ಟಿ ಆದಲ್ಲಿ ನಷ್ಟ ಪರಿಹಾರ ಸಿಗಲಿದೆ ಎಂದರು.

ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆಗಳು ಹಾಗೂ ನೀರಿನ ಮೂಲಗಳ ಸಂರಕ್ಷಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಳೆಯ ಕೊರತೆಯಿಂದ ತಾಲ್ಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು ಕೂಡಲೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ರೈತರಿಗೆ ಮನವಿ ಮಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಮಳೆ ಹಾಗೂ ಬೆಳೆ ಹಾನಿ ವರದಿಗಳನ್ನು ಪರಿಶೀಲಿಸಿದ ಬಳಿಕ ಆಗಸ್ಟ್ ಕೊನೆಯ ವಾರದಲ್ಲಿ ಬರ ಪರಿಹಾರದ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಸರ್ಕಾರವು ರೈತರ ಬೆಂಬಲಕ್ಕೆ ನಿಲ್ಲಲಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೈಜ್ಞಾನಿಕವಾಗಿ ಇಂಗು ಗುಂಡಿಗಳನ್ನು ತಯಾರು ಮಾಡಿ ಅಂತರ್ಜಲ ಮಟ್ಟವನ್ನು ಹೆಚ್ಚಾಗಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬೆಳೆಯು ಮಳೆಯ ಮೇಲೆ ಅವಲಂಬಿತವಾಗಿದ್ದು 10% ಬಿತ್ತನೆ ಮಾತ್ರವಾಗಿದೆ. ಕೆರೆಯಲ್ಲಿ ನೀರು ತುಂಬಿಸಿ ನೀರು ಶೇಖರಣೆ ಮಾಡಬೇಕು. ಕೆರೆಯಲ್ಲಿ ಬುಡ ಸಮೇತ ಮರಗಳನ್ನು ತೆರವುಗೊಳಿಸಿ ಕೆರೆಯನ್ನು ಸ್ವಚ್ಛ ಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

12 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

14 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

15 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

19 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

21 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago