ಬೆಳೆ ಸಮೀಕ್ಷೆದಾರಿರಗೆ ಭದ್ರತೆ, ಜೀವ ವಿಮೆ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ತೋಳಗಳು, ಹೆಜ್ಜೇನುಗಳು ಸೇರಿದಂತೆ ಇತರೆ ಪ್ರಾಣಿಗಳ ದಾಳಿಯಿಂದ ಗಾಯಗೊಂಡಿರುತ್ತೇವೆ. ಹಿಂದೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ, ಹಾಗೂ ಕೋಡ್ಲಾ ಎಂಬ ಗ್ರಾಮದಲ್ಲಿ ನಮ್ಮ ಅಧಿಕಾರಿಗಳಿಗೆ (ಪಿ.ಆರ್) ಬೆಳೆ ಸಮಿಕ್ಷೇದಾರರಿಗೆ ಹಾವು ಕಚ್ಚಿದ್ದು, ಸಬಂಧಪಟ್ಟ ಅಧಿಕಾರಿಗಳಿಗೆ ಈ ಮಾಹಿತಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಇನ್ನೂ ಪರಿಹಾರ ನೀಡಿರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

 ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘದ ರಾಜ್ಯಾಧ್ಯಕ್ಷ ಮದುಚಂದ್ರ ಎಂ. ಮಹಾದೇವಯ್ಯ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜು ಡಿಪರೇಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯದ (ಪಿ.ಆ‌ರ್) ಸಮಿಕ್ಷೇದಾರರಿಗೆ ಸೇವಾ ಭದ್ರತೆ ಹಾಗೂ ಜೀವ ವಿಮೆ ಒದಗಿಸುವ ಮತ್ತುಖಾಯಂಗೊಳಿಸಲುವಂತೆ ಒತ್ತಾಯಿಸಿದ್ದಾರೆ.

ನಾವುಗಳು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡಿತ್ತಿದ್ದೇವೆ. ಸಮಿಕ್ಷೇ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆದ ಕಾರಣ ನಮಗೆ ದಿನಗೂಲಿ ಆಧಾರದ ಮೇಲೆ ದಿನಪೂರ್ತಿ ಕೆಲಸ ನೀಡಬೇಕು ಹಾಗೂ ಜೀವ ವಿಮೆ ಒದಗಿಸಬೇಕು ಮತ್ತು ಎಲ್ಲಾ (ಪಿ.ಆರ್) ಬೆಳೆ ಸಮೀಕ್ಷದಾರಿಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ (ಬುಟ್) ಶೂ. ನೀಡಬೇಕು ಎಂದು ಪಿ.ರಾಜು ಡಿಪರೇಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘ ಬೆಂಗಳೂರು ಒತ್ತಾಯಿಸಿದೆ.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

25 minutes ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

44 minutes ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

11 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

11 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

11 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

15 hours ago