ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ತೋಳಗಳು, ಹೆಜ್ಜೇನುಗಳು ಸೇರಿದಂತೆ ಇತರೆ ಪ್ರಾಣಿಗಳ ದಾಳಿಯಿಂದ ಗಾಯಗೊಂಡಿರುತ್ತೇವೆ. ಹಿಂದೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ, ಹಾಗೂ ಕೋಡ್ಲಾ ಎಂಬ ಗ್ರಾಮದಲ್ಲಿ ನಮ್ಮ ಅಧಿಕಾರಿಗಳಿಗೆ (ಪಿ.ಆರ್) ಬೆಳೆ ಸಮಿಕ್ಷೇದಾರರಿಗೆ ಹಾವು ಕಚ್ಚಿದ್ದು, ಸಬಂಧಪಟ್ಟ ಅಧಿಕಾರಿಗಳಿಗೆ ಈ ಮಾಹಿತಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಇನ್ನೂ ಪರಿಹಾರ ನೀಡಿರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘದ ರಾಜ್ಯಾಧ್ಯಕ್ಷ ಮದುಚಂದ್ರ ಎಂ. ಮಹಾದೇವಯ್ಯ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜು ಡಿಪರೇಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯದ (ಪಿ.ಆರ್) ಸಮಿಕ್ಷೇದಾರರಿಗೆ ಸೇವಾ ಭದ್ರತೆ ಹಾಗೂ ಜೀವ ವಿಮೆ ಒದಗಿಸುವ ಮತ್ತುಖಾಯಂಗೊಳಿಸಲುವಂತೆ ಒತ್ತಾಯಿಸಿದ್ದಾರೆ.
ನಾವುಗಳು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡಿತ್ತಿದ್ದೇವೆ. ಸಮಿಕ್ಷೇ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆದ ಕಾರಣ ನಮಗೆ ದಿನಗೂಲಿ ಆಧಾರದ ಮೇಲೆ ದಿನಪೂರ್ತಿ ಕೆಲಸ ನೀಡಬೇಕು ಹಾಗೂ ಜೀವ ವಿಮೆ ಒದಗಿಸಬೇಕು ಮತ್ತು ಎಲ್ಲಾ (ಪಿ.ಆರ್) ಬೆಳೆ ಸಮೀಕ್ಷದಾರಿಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ (ಬುಟ್) ಶೂ. ನೀಡಬೇಕು ಎಂದು ಪಿ.ರಾಜು ಡಿಪರೇಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘ ಬೆಂಗಳೂರು ಒತ್ತಾಯಿಸಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…