ಬೆಳೆ ಸಮೀಕ್ಷೆದಾರಿರಗೆ ಭದ್ರತೆ, ಜೀವ ವಿಮೆ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ತೋಳಗಳು, ಹೆಜ್ಜೇನುಗಳು ಸೇರಿದಂತೆ ಇತರೆ ಪ್ರಾಣಿಗಳ ದಾಳಿಯಿಂದ ಗಾಯಗೊಂಡಿರುತ್ತೇವೆ. ಹಿಂದೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ, ಹಾಗೂ ಕೋಡ್ಲಾ ಎಂಬ ಗ್ರಾಮದಲ್ಲಿ ನಮ್ಮ ಅಧಿಕಾರಿಗಳಿಗೆ (ಪಿ.ಆರ್) ಬೆಳೆ ಸಮಿಕ್ಷೇದಾರರಿಗೆ ಹಾವು ಕಚ್ಚಿದ್ದು, ಸಬಂಧಪಟ್ಟ ಅಧಿಕಾರಿಗಳಿಗೆ ಈ ಮಾಹಿತಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಇನ್ನೂ ಪರಿಹಾರ ನೀಡಿರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

 ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘದ ರಾಜ್ಯಾಧ್ಯಕ್ಷ ಮದುಚಂದ್ರ ಎಂ. ಮಹಾದೇವಯ್ಯ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜು ಡಿಪರೇಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯದ (ಪಿ.ಆ‌ರ್) ಸಮಿಕ್ಷೇದಾರರಿಗೆ ಸೇವಾ ಭದ್ರತೆ ಹಾಗೂ ಜೀವ ವಿಮೆ ಒದಗಿಸುವ ಮತ್ತುಖಾಯಂಗೊಳಿಸಲುವಂತೆ ಒತ್ತಾಯಿಸಿದ್ದಾರೆ.

ನಾವುಗಳು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡಿತ್ತಿದ್ದೇವೆ. ಸಮಿಕ್ಷೇ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆದ ಕಾರಣ ನಮಗೆ ದಿನಗೂಲಿ ಆಧಾರದ ಮೇಲೆ ದಿನಪೂರ್ತಿ ಕೆಲಸ ನೀಡಬೇಕು ಹಾಗೂ ಜೀವ ವಿಮೆ ಒದಗಿಸಬೇಕು ಮತ್ತು ಎಲ್ಲಾ (ಪಿ.ಆರ್) ಬೆಳೆ ಸಮೀಕ್ಷದಾರಿಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ (ಬುಟ್) ಶೂ. ನೀಡಬೇಕು ಎಂದು ಪಿ.ರಾಜು ಡಿಪರೇಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘ ಬೆಂಗಳೂರು ಒತ್ತಾಯಿಸಿದೆ.

Ramesh Babu

Journalist

Recent Posts

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 minutes ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

14 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

20 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 days ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 days ago