ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ತೋಳಗಳು, ಹೆಜ್ಜೇನುಗಳು ಸೇರಿದಂತೆ ಇತರೆ ಪ್ರಾಣಿಗಳ ದಾಳಿಯಿಂದ ಗಾಯಗೊಂಡಿರುತ್ತೇವೆ. ಹಿಂದೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ, ಹಾಗೂ ಕೋಡ್ಲಾ ಎಂಬ ಗ್ರಾಮದಲ್ಲಿ ನಮ್ಮ ಅಧಿಕಾರಿಗಳಿಗೆ (ಪಿ.ಆರ್) ಬೆಳೆ ಸಮಿಕ್ಷೇದಾರರಿಗೆ ಹಾವು ಕಚ್ಚಿದ್ದು, ಸಬಂಧಪಟ್ಟ ಅಧಿಕಾರಿಗಳಿಗೆ ಈ ಮಾಹಿತಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಇನ್ನೂ ಪರಿಹಾರ ನೀಡಿರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘದ ರಾಜ್ಯಾಧ್ಯಕ್ಷ ಮದುಚಂದ್ರ ಎಂ. ಮಹಾದೇವಯ್ಯ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜು ಡಿಪರೇಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯದ (ಪಿ.ಆರ್) ಸಮಿಕ್ಷೇದಾರರಿಗೆ ಸೇವಾ ಭದ್ರತೆ ಹಾಗೂ ಜೀವ ವಿಮೆ ಒದಗಿಸುವ ಮತ್ತುಖಾಯಂಗೊಳಿಸಲುವಂತೆ ಒತ್ತಾಯಿಸಿದ್ದಾರೆ.
ನಾವುಗಳು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡಿತ್ತಿದ್ದೇವೆ. ಸಮಿಕ್ಷೇ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆದ ಕಾರಣ ನಮಗೆ ದಿನಗೂಲಿ ಆಧಾರದ ಮೇಲೆ ದಿನಪೂರ್ತಿ ಕೆಲಸ ನೀಡಬೇಕು ಹಾಗೂ ಜೀವ ವಿಮೆ ಒದಗಿಸಬೇಕು ಮತ್ತು ಎಲ್ಲಾ (ಪಿ.ಆರ್) ಬೆಳೆ ಸಮೀಕ್ಷದಾರಿಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ (ಬುಟ್) ಶೂ. ನೀಡಬೇಕು ಎಂದು ಪಿ.ರಾಜು ಡಿಪರೇಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘ ಬೆಂಗಳೂರು ಒತ್ತಾಯಿಸಿದೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…