ಬೆಳೆ ಸಮೀಕ್ಷೆ ಮಾಡುವ ವೇಳೆ ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಹಲ್ಲೆ ಆರೋಪಿ ಪೊಲೀಸ್ ವಶ: ಮುಂದುವರಿದ ಪೊಲೀಸ್ ತನಿಖೆ

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago