ಬೆಳೆ ಸಮೀಕ್ಷೆ ಮಾಡುವ ವೇಳೆ ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಹಲ್ಲೆ ಆರೋಪಿ ಪೊಲೀಸ್ ವಶ: ಮುಂದುವರಿದ ಪೊಲೀಸ್ ತನಿಖೆ

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago