ಬೆಳೆ ಸಮೀಕ್ಷೆ ಮಾಡುವ ವೇಳೆ ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಹಲ್ಲೆ ಆರೋಪಿ ಪೊಲೀಸ್ ವಶ: ಮುಂದುವರಿದ ಪೊಲೀಸ್ ತನಿಖೆ

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

9 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

10 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

12 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago