ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…