ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…