ಬೆಳೆ ಸಮೀಕ್ಷೆ ಮಾಡುವ ವೇಳೆ ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಹಲ್ಲೆ ಆರೋಪಿ ಪೊಲೀಸ್ ವಶ: ಮುಂದುವರಿದ ಪೊಲೀಸ್ ತನಿಖೆ

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

28 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

2 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago