ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…