ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…