ಬೆಳೆ ಹಾನಿಗೆ ಒಳಗಾದ ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ವಿತರಿಸಲು ಚಾಲನೆ

ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ವಿತರಿಸಲು ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

• ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ.

• ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದೇನೆ.

• ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ.

• ಎಸ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ.

• ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಅನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ.

• ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ.

• ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.

• ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.

• ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.

• ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

• ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್‌ಲೈನ್ ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್‌ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

• ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್‌ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು PDNA (Recovery & Reconstruction) ಅಡಿಯಲ್ಲಿ ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ.

• ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

1 hour ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago