ಬೆಳೆ ಹಾನಿಗೆ ಒಳಗಾದ ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ವಿತರಿಸಲು ಚಾಲನೆ

ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ವಿತರಿಸಲು ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

• ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ.

• ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದೇನೆ.

• ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ.

• ಎಸ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ.

• ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಅನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ.

• ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ.

• ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.

• ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.

• ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.

• ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

• ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್‌ಲೈನ್ ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್‌ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

• ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್‌ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು PDNA (Recovery & Reconstruction) ಅಡಿಯಲ್ಲಿ ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ.

• ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago