ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.
ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥೀತಿ ಗಂಭೀರವಾಗಿದೆ.
ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4), ಒಂದು ವರ್ಷದ ಮಗು ಸಾವನ್ನಪ್ಪಿದ್ದಾರೆ.
ತಿರುಪತಿಯಿಂದ ಬೆಂಗಳೂರಿಗೆ ಬರ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಲಾಗಿದೆ.
ಡಿಕ್ಕಿ ರಭಸಕ್ಕೆ ಆಂಧ್ರ ಸಾರಿಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…