ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.
ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥೀತಿ ಗಂಭೀರವಾಗಿದೆ.
ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4), ಒಂದು ವರ್ಷದ ಮಗು ಸಾವನ್ನಪ್ಪಿದ್ದಾರೆ.
ತಿರುಪತಿಯಿಂದ ಬೆಂಗಳೂರಿಗೆ ಬರ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಲಾಗಿದೆ.
ಡಿಕ್ಕಿ ರಭಸಕ್ಕೆ ಆಂಧ್ರ ಸಾರಿಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…