ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ..
ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಅಶ್ವಿನ್ ನಾಯರ್ 17 ವರ್ಷ ಆರ್ ವಿ ಪಿಯು ಕಾಲೇಜ್ , ಕೊತ್ತನೂರು ನಿವಾಸಿ, ಅರ್ಹನ್ ಶರೀಫ್, ಸಿಎಂಆರ್ ಶಾಲೆ ವಿದ್ಯಾರ್ಥಿ, ಹೆಚ್ ವಿ ಆರ್ ಲೇಔಟ್ ನಿವಾಸಿ, ಅಯನ್ 17 ವರ್ಷ ಸಿ ಎಂ ಆರ್ ಸ್ಕೂಲ್, ಭರತ್ 18 ವರ್ಷ , ಸಿಎಂಆರ್ ಕಾಲೇಜ್, ಫ್ರೇಜನ್ ಟೌನ್ ನಿವಾಸಿ, ಲ ಈತನ್ ಜಾರ್ಜ್ 17 ವರ್ಷ ಆರ್ ವಿ 1st ಪಿಯು ಕಾಲೇಜ್( ಹುಳಿಮಾವು ನಿವಾಸಿ).
ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಇದ್ದವರ ಕಾರು ಸವಾರಿ ಮಾಡಲಾಗಿತ್ತು. ನಗರದ ವಿವಿಧ ಶಾಲಾ- ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹುಡುಗರು. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಡ್ರೈವಿಂಗ್ ಮಾಡುತ್ತಿದ್ದರು. XUV ಕಾರಿನಲ್ಲಿ ಔಟಿಂಗ್ ಹೋದ ಹುಡುಗರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಎಸ್ಎಸ್ ಎಲ್ ಸಿ, ಮೊದಲ ಪಿಯುಸಿ ವಿದ್ಯಾರ್ಥಿಗಳು ಮೃತಪಟ್ಟವರು ಎಂದು ತಿಳಿದುಬಂದಿದೆ… ಆರು ಹುಡುಗರಲ್ಲಿ ಐವರ ಗುರುತು ಪತ್ತೆಯಾಗಿದೆ.
ಮೂರು ಶಾಲಾ- ಕಾಲೇಜಿನ ಸ್ನೇಹಿತರು ಒಂದೆಡೆ ಸೇರಿ ಹೊಸಕೋಟೆ ಬಿರಿಯಾನಿ ಸವಿಯಲು ಆಗಮಿಸಿದ್ದರು ಎನ್ನುವ ಸಂಶಯವ್ಯಕ್ತವಾಗಿದೆ. ಅತಿ ವೇಗದ ಚಾಲನೆ ಬ್ಯಾಲೆನ್ಸ್ ಮಾಡಲಾಗದೇ ಸರಣಿ ಅಪಘಾತವಾಗಿದೆ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ…
ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ…
2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ…
ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ…
ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು…
ಸಂವಿಧಾನ - ತಿಳಿವಳಿಕೆ ಮತ್ತು ನಡವಳಿಕೆ.......... ಈ ಬಗ್ಗೆ ಗೆಳೆಯರ ಬಳಿ ಚರ್ಚೆ ಮಾಡುತ್ತಿದ್ದಾಗ ಅವರು ಹೇಳಿದರು " ಭಾರತದ…
ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು…