Categories: Accident

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಔಟಿಂಗ್ ಹೋದ ಟೀನೆಜರ್ಸ್ ಸೇರಿದ್ದು ಮಸಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ..

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅಶ್ವಿನ್ ನಾಯರ್ 17 ವರ್ಷ ಆರ್ ವಿ ಪಿಯು ಕಾಲೇಜ್ , ಕೊತ್ತನೂರು ನಿವಾಸಿ, ಅರ್ಹನ್ ಶರೀಫ್,  ಸಿಎಂಆರ್ ಶಾಲೆ ವಿದ್ಯಾರ್ಥಿ, ಹೆಚ್ ವಿ ಆರ್ ಲೇಔಟ್ ನಿವಾಸಿ, ಅಯನ್ 17 ವರ್ಷ ಸಿ ಎಂ ಆರ್ ಸ್ಕೂಲ್, ಭರತ್ 18 ವರ್ಷ , ಸಿಎಂಆರ್ ಕಾಲೇಜ್, ಫ್ರೇಜನ್ ಟೌನ್ ನಿವಾಸಿ, ಲ ಈತನ್ ಜಾರ್ಜ್ 17 ವರ್ಷ ಆರ್ ವಿ 1st ಪಿಯು ಕಾಲೇಜ್( ಹುಳಿಮಾವು ನಿವಾಸಿ).

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಇದ್ದವರ ಕಾರು ಸವಾರಿ ಮಾಡಲಾಗಿತ್ತು. ನಗರದ ವಿವಿಧ ಶಾಲಾ- ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹುಡುಗರು. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಡ್ರೈವಿಂಗ್ ಮಾಡುತ್ತಿದ್ದರು.  XUV ಕಾರಿನಲ್ಲಿ ಔಟಿಂಗ್ ಹೋದ ಹುಡುಗರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಎಸ್ಎಸ್ ಎಲ್ ಸಿ, ಮೊದಲ ಪಿಯುಸಿ ವಿದ್ಯಾರ್ಥಿಗಳು ಮೃತಪಟ್ಟವರು ಎಂದು ತಿಳಿದುಬಂದಿದೆ… ಆರು ಹುಡುಗರಲ್ಲಿ ಐವರ ಗುರುತು ಪತ್ತೆಯಾಗಿದೆ.

ಮೂರು ಶಾಲಾ- ಕಾಲೇಜಿನ ಸ್ನೇಹಿತರು ಒಂದೆಡೆ ಸೇರಿ ಹೊಸಕೋಟೆ ಬಿರಿಯಾನಿ ಸವಿಯಲು ಆಗಮಿಸಿದ್ದರು ಎನ್ನುವ ಸಂಶಯವ್ಯಕ್ತವಾಗಿದೆ. ಅತಿ ವೇಗದ ಚಾಲನೆ ಬ್ಯಾಲೆನ್ಸ್ ಮಾಡಲಾಗದೇ ಸರಣಿ ಅಪಘಾತವಾಗಿದೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ…

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago