Categories: Accident

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಔಟಿಂಗ್ ಹೋದ ಟೀನೆಜರ್ಸ್ ಸೇರಿದ್ದು ಮಸಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ..

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅಶ್ವಿನ್ ನಾಯರ್ 17 ವರ್ಷ ಆರ್ ವಿ ಪಿಯು ಕಾಲೇಜ್ , ಕೊತ್ತನೂರು ನಿವಾಸಿ, ಅರ್ಹನ್ ಶರೀಫ್,  ಸಿಎಂಆರ್ ಶಾಲೆ ವಿದ್ಯಾರ್ಥಿ, ಹೆಚ್ ವಿ ಆರ್ ಲೇಔಟ್ ನಿವಾಸಿ, ಅಯನ್ 17 ವರ್ಷ ಸಿ ಎಂ ಆರ್ ಸ್ಕೂಲ್, ಭರತ್ 18 ವರ್ಷ , ಸಿಎಂಆರ್ ಕಾಲೇಜ್, ಫ್ರೇಜನ್ ಟೌನ್ ನಿವಾಸಿ, ಲ ಈತನ್ ಜಾರ್ಜ್ 17 ವರ್ಷ ಆರ್ ವಿ 1st ಪಿಯು ಕಾಲೇಜ್( ಹುಳಿಮಾವು ನಿವಾಸಿ).

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಇದ್ದವರ ಕಾರು ಸವಾರಿ ಮಾಡಲಾಗಿತ್ತು. ನಗರದ ವಿವಿಧ ಶಾಲಾ- ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹುಡುಗರು. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಡ್ರೈವಿಂಗ್ ಮಾಡುತ್ತಿದ್ದರು.  XUV ಕಾರಿನಲ್ಲಿ ಔಟಿಂಗ್ ಹೋದ ಹುಡುಗರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಎಸ್ಎಸ್ ಎಲ್ ಸಿ, ಮೊದಲ ಪಿಯುಸಿ ವಿದ್ಯಾರ್ಥಿಗಳು ಮೃತಪಟ್ಟವರು ಎಂದು ತಿಳಿದುಬಂದಿದೆ… ಆರು ಹುಡುಗರಲ್ಲಿ ಐವರ ಗುರುತು ಪತ್ತೆಯಾಗಿದೆ.

ಮೂರು ಶಾಲಾ- ಕಾಲೇಜಿನ ಸ್ನೇಹಿತರು ಒಂದೆಡೆ ಸೇರಿ ಹೊಸಕೋಟೆ ಬಿರಿಯಾನಿ ಸವಿಯಲು ಆಗಮಿಸಿದ್ದರು ಎನ್ನುವ ಸಂಶಯವ್ಯಕ್ತವಾಗಿದೆ. ಅತಿ ವೇಗದ ಚಾಲನೆ ಬ್ಯಾಲೆನ್ಸ್ ಮಾಡಲಾಗದೇ ಸರಣಿ ಅಪಘಾತವಾಗಿದೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ…

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

5 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

6 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago