ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬೆಂಗಳೂರು ಆರ್ ಟಿ ಒ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಮುಖ್ಯ ಆಡಳಿತಾಧಿಕಾರಿ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್, ಮೈಸೂರು ರೆವೆನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ, ಹೂಟಗಳ್ಳಿ ನಗರ ಪಾಲಿಕೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳ ಆಸ್ತಿ ಮೇಲೆ ನಿಗಾ ಇಟ್ಟಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಲಾಷ್ ಮಾಡುತ್ತಿದ್ದಾರೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಎಫ್ ಡಿ ಎ ಲಕ್ಷ್ಮೀಪತಿ ಸಿಎನ್, ದಾವಣಗೆರೆ ಎಪಿಎಂಸಿ ನಿರ್ದೇಶಕ ಪ್ರಭು.ಜೆ, ಮೈಸೂರಿನ ಸಹಾಯಕ ಇಂಜಿನಿಯರ್ ಗಿರೀಶ್ ಡಿಎಂ ಸೇರಿದಂತೆ 11 ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ಅಕ್ರಮ ಹಣ ಸಂಪಾದನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…